ಅಯೋಧ್ಯೆಯ ರಾಮನ ದರುಶನ ಮಾಡಿ ಇಹದ ಯಾತ್ರೆ ಮುಗಿಸಿದ ಪಾಂಡುರಂಗ ಶಾನುಭಾಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸಕ್ರಿಯ ಕಾರ್ಯಕರ್ತ , ರಾಷ್ಟ್ರಭಕ್ತ ಉಡುಪಿಯ ಪಾಂಡುರಂಗ ಶಾನುಭಾಗ್ ಅವರು ಭಾನುವಾರ ಮಧ್ಯಾಹ್ನ ಅಯೋಧ್ಯೆ ರಾಮಮಂದಿರದ ಸಮೀಪ ಹೃದಯಾಘಾತದಿಂದ ಇಹದ ಯಾತ್ರೆ ಮುಗಿಸಿದ್ದಾರೆ.

ಇಂದು ಬೆಳಿಗ್ಗೆ ರಾಮನ ದರುಶನ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು.

ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ಅವರಿಗೆ ಹೃದಯಾಘಾತವಾಗಿದೆ . ಸಮೀಪವರ್ತಿಗಳು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ದೈಹಿಕ ಅಂಧತ್ವವಿದ್ದರೂ, ಸಂಘದಲ್ಲಿ ಅತ್ಯಂತ ಸಕ್ರಿಯರಾಗಿದ್ದ ಶಾನುಭಾಗರು ಅಪೂರ್ವ ಚಿಂತಕರೂ ರಾಷ್ಟ್ರ ಭಕ್ತರೂ ಆಗಿದ್ದರು .

ಅವರ ಅಗಲುವಿಕೆಯಿಂದ ನಿಜಕ್ಕೂ ದುಃಖವಾಗಿದೆ . ಆದರೆ ರಾಮ ದರ್ಶನಪಡೆದು ರಾಮನ ಪಾದಮೂಲದಲ್ಲಿ ಜೀವನಯಾತ್ರೆ ಮುಗಿಸಿದ ಶಾನುಭಾಗ್ ಅವರ ಜೀವನ ರಾಮನ ಚಿತ್ತಕ್ಕೂ ಬಂದಂತಿದೆ .

ವಿಶ್ವ ಹಿಂದು ಪರಿಷತ್ ಮುಖಂಡ ಗೋಪಾಲ್ ಜಿ, ಮಾಜಿ ಶಾಸಕ ರಘುಪತಿ ಭಟ್ ಸ್ಥಳದಲ್ಲಿದ್ದು ಮುಂದಿನ ವ್ಯವಸ್ಥೆಗಳ ಬಗ್ಗೆ ಪ್ರವೃತ್ತರಾಗಿದ್ಧಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!