ಲಖನೌ ವಿರುದ್ಧ ಎಡವಿದ ಗುಜರಾತ್ ಗೆ ಆಸರೆಯಾದ ಪಾಂಡ್ಯ: ಗೆಲುವಿಗೆ ಸಾಧಾರಣ ಮೊತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಯಕ ಹಾರ್ದಿಕ್ ಪಾಂಡ್ಯ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಕೇವಲ 135 ರನ್‌ ಗಳಿಸಿದೆ. ಈ ಮೂಲಕ ಕೆ ಎಲ್ ರಾಹುಲ್ ನೇತೃತ್ವದ ಲಖನೌ ತಂಡವು ಗೆಲ್ಲಲು ಸಾಧಾರಣ ಗುರಿ ಪಡೆದಿದೆ.

ಅಟಲ್‌ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಹಾಲಿ ಚಾಂಪಿಯನ್‌ ಗುಜರಾತ್ ಟೈಟಾನ್ಸ್‌ ತಂಡವು ಎರಡನೇ ಓವರ್‌ನಲ್ಲೇ ತಾರಾ ಆರಂಭಿಕ ಬ್ಯಾಟರ್‌ ಶುಭ್‌ಮನ್‌ ಗಿಲ್ ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು.

ಎರಡನೇ ವಿಕೆಟ್‌ಗೆ ಜತೆಯಾದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್‌ ಬ್ಯಾಟರ್‌ ವೃದ್ದಿಮಾನ್ ಸಾಹ ಎಚ್ಚರಿಕೆಯ ಆಟವಾಡುವ ಮೂಲಕ ಆರಂಭಿಕ ಆಘಾತದಿಂದ ಗುಜರಾತ್ ಟೈಟಾನ್ಸ್‌ ತಂಡವನ್ನು ಪಾರು ಮಾಡಿದರು. ಸಾಹ ಅಂತಿಮವಾಗಿ 37 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 47 ರನ್‌ ಬಾರಿಸಿ ಕೃನಾಲ್ ಪಾಂಡ್ಯಗೆ ಎರಡನೇ ಬಲಿಯಾದರು.

ವೃದ್ದಿಮಾನ್ ಸಾಹ ಜತೆಗೆ ಜವಾಬ್ದಾರಿಯುತ ಅರ್ಧಶತಕದ ಜತೆಯಾಟವಾಡಿದ ಹಾರ್ದಿಕ್‌ ಪಾಂಡ್ಯ, ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು.

ಇನ್ನು ಡೆತ್‌ ಓವರ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡುವ ಕ್ಷಮತೆ ಹೊಂದಿರುವ ಡೇವಿಡ್ ಮಿಲ್ಲರ್ ಬರೋಬ್ಬರಿ 12 ಎಸೆತಗಳನ್ನು ಎದುರಿಸಿ ಕೇವಲ 6 ರನ್‌ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ರನ್‌ ಗಳಿಸಲು ಪರದಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!