ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಲಗೇಜ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿ ಆತಂಕ ಸೃಷ್ಟಿ ಮಾಡಿದ್ದರು. ಮುಂಬೈನಿಂದ ಕೋಲ್ಕತ್ತಾಗೆ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲಗೇಜ್ಗೆ ಹೆಚ್ಚುವರಿ ಹಣ ನೀಡುವಂತೆ ಕೇಳಿದಾಗ ಈ ಘಟನೆ ನಡೆದಿದೆ.
ಮಹಿಳೆ ಪಾವತಿಸಲು ನಿರಾಕರಿಸಿ ಬಳಿಕ ತನ್ನ ಬ್ಯಾಗ್ನಲ್ಲಿ ಬಾಂಬ್ ಇರುವುದಾಗಿ ಹೇಳಿಕೊಂಡಿದ್ದಾಳೆ. ತಪಾಸಣೆ ನಡೆಸಿದ ಬಳಿಕ ತನ್ನ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತು ಏನೂ ಕಂಡುಬಂದಿಲ್ಲ.
ಘಟನೆಯ ನಂತರ, ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 505 (2) ಅಡಿಯಲ್ಲಿ ಸಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆಕೆಯನ್ನು ಬಂಧಿಸಲಾಗಿದೆ.
ನಂತರ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಂತರ ಆಕೆಗೆ ಜಾಮೀನು ನೀಡಲಾಯಿತು.