ಕಣಿವೆ ರಾಜ್ಯದಲ್ಲಿ ಆತಂಕ: ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದವರ ಮೇಲೆ ಉಗ್ರರ ಗುಂಡೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಸಿದೆ.
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಗುಂಡಿನ ದಾಳಿ ನಡೆಸಿದ ಉಗ್ರರು, ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಬಲಿ ಪಡೆದಿದ್ದಾರೆ.
ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿನ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಎಂದು ಗುರುತಿಸಲಾಗಿದೆ. ದಾಳಿ ನಡೆಸಿದ ಮರು ಕ್ಷಣದಲ್ಲಿಯೇ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಲೇ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!