ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಕುಡಿಯುವ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಪರಿಶೀಲನೆ ಸಭೆ ನಡೆಸಿದ್ದಾರೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲು ಚಿಂತಿಸಲಾಗಿದ್ದು, ಜೊತೆಗೆ ಸಹಾಯವಾಣಿ ಆರಂಭಿಸಲು ಸೂಚನೆ ನೀಡಿದ್ದಾರೆ. ರಾಜ್ಯದ 194 ತಾಲೂಕುಗಳಲ್ಲಿ ತೀವ್ರ ಬರವಿದೆ, ಕುಡಿಯಲು ನೀರಿನ ಸಮಸ್ಯೆ ಆಗಬಾರದು, ಎಷ್ಟೇ ಹಣ ಬೇಕಿದ್ದರೂ ಸರ್ಕಾರ ನೀಡುತ್ತದೆ ಎಂದಿದ್ದಾರೆ.