ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರೇಶ್ ಮೇಸ್ತಾ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಒತ್ತಾಯದ ಮೇರೆಗೆ ಐಜಿ ಹೇಮಂತ್ ನಿಂಬಾಳ್ಕರ್ ಸುಳ್ಳು ದೂರು ದಾಖಲಿಸಿದ್ದಾರೆ ಎಂಬ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು ನೀಡಿದ್ದಾರೆ.
‘ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು?, ಹೋರಾಟದ ನೇತೃತ್ವ ವಹಿಸಿದ್ದ ನಿಮ್ಮ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಪ್ರಕರಣವನ್ನು ದಾಖಲಿಸುವುದಿಲ್ಲ ಎಂದು ನೀವು ಯಾರೊಂದಿಗೆ ಒಪ್ಪಿಕೊಂಡಿದ್ದೀರಿ? ನಾನು ಮಹಿಳೆ ಎಂಬ ಕಾರಣಕ್ಕೆ ಅವರು ನನ್ನನ್ನು ಮತ್ತು ನನ್ನ ಕುಟುಂಬವನ್ನು ಗುರಿಯಾಗಿಸಿದರು. ಇದೀಗ ನನ್ನ ಪತಿ ಕುಡಿದಿದ್ದಾನೆ ಎಂದು ಕಾಗೇರಿ ಆರೋಪಿಸಿದ್ದಾರೆ. ಆಗ ಕಾಗೇರಿ ಆ ಭಾಗದ ಶಾಸಕರಾಗಿದ್ದರು. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದೇವೆ ಎನ್ನುತ್ತಾರೆ. ಹೌದಾದರೆ ಹಿಂದುಳಿದ ಯುವಕರ ಮೇಲೆ ಮಾತ್ರ ಏಕೆ ಕೇಸುಗಳನ್ನು ಹಾಕುತ್ತಾರೆಯೇ ಹೊರತು ಹೋರಾಟ ಮಾಡಿದ ನಿಮ್ಮಂತಹ ನಾಯಕರ ಮೇಲೆ ಯಾಕೆ ಕೇಸ್ ಹಾಕಿಲ್ಲ? ಎಂದು ಕಿಡಿಕಾರಿದ್ದಾರೆ.