ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ಮೇಕರ್ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ನಾಲ್ಕು ಪಥದ ಸುರಂಗ ಮಾರ್ಗದ ಒಂದು ಭಾಗ ಗುರುವಾರ ತಡರಾತ್ರಿ ಕುಸಿದು 10 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಸುರಂಗ ಕುಸಿತದ ಪರಿಣಾಮ ಹಲವಾರು ಮಂದಿ ಗಾಯಗೊಂಡಿದ್ದಾರೆ. ತ್ವರಿತಗತಿಯುಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಸೇನೆ ತೊಡಗಿಸಿಕೊಂಡಿದೆ.
ನಾಪತ್ತೆಯಾಗಿರುವವರು ಅಥವಾ ಸುರಂಗದೊಳಗೆ ಸಿಲುಕಿರುವವರು ಸುರಂಗದ ಲೆಕ್ಕ ಪರಿಶೋಧನೆ ಕಾರ್ಯ ನಿರ್ವಹಿಸುತ್ತಿರುವ ಕಂಪನಿಗೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ್ರಿ, ಖೋನಿ ನಾಲಾದಲ್ಲಿ ಸುರಂಗದ ಮುಂಭಾಗದ ಸಣ್ಣ ಭಾಗವು ಲೆಕ್ಕಪರಿಶೋಧನೆಯ ಸಮಯದಲ್ಲಿ ಕುಸಿದಿದೆ ಎಂದು ಅವರು ಹೇಳಿದರು. ಗಾಯಗೊಂಡಿದ್ದ ನಾಲ್ವರನ್ನು ರಕ್ಷಿಸಲಾಗಿದೆ.
ಸುರಂಗದ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬುಲ್ಡೋಜರ್ಗಳು ಮತ್ತು ಟ್ರಕ್ಗಳು ಸೇರಿದಂತೆ ಹಲವಾರು ಯಂತ್ರಗಳು ಮತ್ತು ವಾಹನಗಳು ಹಾನಿಗೊಳಗಾಗಿವೆ.
ರಾಂಬನ್ ಡೆಪ್ಯುಟಿ ಕಮಿಷನರ್ ಮಸ್ಸರತುಲ್ ಇಸ್ಲಾಂ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಅವರು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬನಿಹಾಲ್ ನಗರದಿಂದ ಹಲವಾರು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ