ಹೊಸ ದಿಗಂತ ವರದಿ, ಹುಬ್ಬಳ್ಳಿ:
ಯಾವುದೇ ಪಕ್ಷದ ನಾಯಕರಾಗಿರಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.
ದೇಶದ ವಿಭಜನೆ ಮಾಡುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ತರಬೇಕು ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಯಾರು ಸಹ ಈ ರೀತಿ ಹೇಳಿಕೆ ನೀಡಬಾರದು ಎಂದರು.
ಕಾಂಗ್ರೆಸ್ ನಾಯಕರು ಬಿಜೆಪಿ ಗಾಂಧಿ ಹತ್ಯೆ ಮಾಡಿದೆ ಎಂದು ಹೇಳಿಕೊಂಡು 40-50 ವರ್ಷ ದೇಶದಲ್ಲಿ ಆಡಳಿತ ಮಾಡಿದ್ದಾರೆ. ಬಿಜೆಪಿ ಅವರು ಮಹತ್ಮ ಗಾಂಧಿ ಅವರನ್ನು ಹತ್ಯೆ ಮಾಡಿಲ್ಲ ಎಂಬುವುದು ಎಲ್ಲರಿಗೂ ಗೊತ್ತಿದೆ. ಈ ವಿಷಯ ಪದೇ ಪದೇ ಹೇಳುವ ಮೂಲಕ ಜನರನ್ನು ಮುರ್ಖರಾಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧಿಸುವ ವಿಚಾರ ಅವರಿಗೆ ಬಿಟ್ಟಿದ್ದು. ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.