ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ.
ಚಲುವೇಗೌಡ ಮೃತ ಪ್ರಯಾಣಿಕ.
ಮಹಿಳಾ ಶಕ್ತಿ ಯೋಜನೆಯಿಂದ ಬಸ್ ಸಂಪೂರ್ಣ ರಶ್ ಆಗಿದ್ದು, ಇದರಿಂದ ಮೆಟ್ಟಿಲ ಮೇಲೆ ನಿಂತಿದ್ದ ಪ್ರಯಾಣಿಕ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.