ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಮಾನದಲ್ಲಿ ಮಹಿಳೆ ಮೇಲೆ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಕಂಪನಿಯ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಕ್ಷಮೆ ಕೋರಿದ್ದಾರೆ.
ವಿಮಾನ ಸಂಚಾರದ ವೇಳೆ ಆಲ್ಕೋಹಾಲ್ ನೀಡುವುದಕ್ಕೆ ಸಂಬಂಧಿಸಿದ ನೀತಿಯನ್ನು ಪರಾಮರ್ಶಿಸಲಾಗುವುದು. ಅದೇ ರೀತಿ ಪರಿಸ್ಥಿತಿಯನ್ನು ಸಿಬ್ಬಂದಿ ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು. ವಿಮಾನದ ಸಿಬ್ಬಂದಿ ಮತ್ತು ಪೈಲಟ್ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಹಕರಿಗೆ ಆಗಿರುವ ತೊಂದರೆ ಬಗ್ಗೆ ಏರ್ ಇಂಡಿಯಾ ತೀವ್ರ ಕಾಳಜಿ ಹೊಂದಿದೆ. ಇಂಥ ಘಟನೆಗಳ ಬಗ್ಗೆ ತೀವ್ರ ವಿಷಾದವಿದೆ. ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ವಿಲ್ಸನ್ ಹೇಳಿದ್ದಾರೆ.
ನ್ಯೂಯಾರ್ಕ್ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ ಆಸನ ವಿಭಾಗದಲ್ಲಿ ಕುಡಿದ ಅಮಲಿನಲ್ಲಿ ಶಂಕರ್ ಮಿಶ್ರಾ ಎಂಬ ವ್ಯಕ್ತಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು.