ರಾಜಮಂಡ್ರಿ ಸೆಂಟ್ರಲ್‌ ಜೈಲಿನಲ್ಲಿ ಚಂದ್ರಬಾಬು ಭೇಟಿಯಾಗಲಿರುವ ಮೂವರು ನಾಯಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಪಿ ಸ್ಕಿಲ್ ಡೆವಲಪ್‌ಮೆಂಟ್ ಪ್ರಕರಣದಲ್ಲಿ ಬಂಧಿತರಾಗಿರುವ ಟಿಡಿಪಿ ನಾಯಕ, ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಪ್ರಸ್ತುತ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಮತ್ತೊಂದೆಡೆ ಜೈಲಿನಲ್ಲಿ ಚಂದ್ರಬಾಬು ಅವರನ್ನು ಭೇಟಿಯಾಗುವವರ ಸಂಖ್ಯೆಯೂ ಕ್ರಮೇಣ ಹೆಚ್ಚಾಗುತ್ತಿದೆ. ಇಂದು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ನಂದಮೂರಿ ಬಾಲಕೃಷ್ಣ ಮತ್ತು ನಾರಾ ಲೋಕೇಶ್ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇಂದು ಬಾಲಕೃಷ್ಣ ಮತ್ತು ಪವನ್ ಕಲ್ಯಾಣ್ ಮೊದಲ ಬಾರಿಗೆ ರಾಜಕೀಯ ಪರದೆಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ವಿಮಾನ ನಿಲ್ದಾಣದಿಂದ ನೇರವಾಗಿ ಸೆಂಟ್ರಲ್ ಜೈಲಿಗೆ ಬರಲಿದ್ದಾರೆ. ಅದೇ ವೇಳೆಗೆ ಬಾಲಯ್ಯ ಮತ್ತು ಲೋಕೇಶ್ ಕೇಂದ್ರ ಕಾರಾಗೃಹಕ್ಕೆ ಬರಲಿದ್ದಾರೆ.

ಪವನ್ ಕಲ್ಯಾಣ್ ಮತ್ತು ಬಾಲಕೃಷ್ಣ ಆಗಮನದ ಹಿನ್ನೆಲೆಯಲ್ಲಿ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. 300 ಪೊಲೀಸರೊಂದಿಗೆ ಭದ್ರತೆ ಏರ್ಪಡಿಸಲಾಗಿತ್ತು. ಸರ್ಕಾರಿ ಆಸ್ಪತ್ರೆ, ಕಲಾ ಕಾಲೇಜುಗಳ ಬಳಿ ಬೃಹತ್‌ ಕಟ್ಟೆಚ್ಚರ ವಹಿಸಿ ವಾಹನಗಳನ್ನು ಬೇರೆಡೆಗೆ ತಿರುಗಿಸಲಾಯಿತು. ವಿಮಾನ ನಿಲ್ದಾಣದಿಂದ ಕೇಂದ್ರ ಕಾರಾಗೃಹದವರೆಗಿನ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್ ಪಿಕೆಟಿಂಗ್ ವ್ಯವಸ್ಥೆ ಮಾಡಲಾಗಿದೆ. 11:30ರ ನಂತರ ಈ ಮೂವರು ಚಂದ್ರಬಾಬು ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!