July 29, 2026
Wednesday, July 29, 2026
spot_img

ಪವನ್ ಖೇರಾಗೆ ‘ಹೈ’ ಶಾಕ್: ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಗುವಾಹಟಿ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಅಸ್ಸಾಂ ಪ್ರಕರಣದಲ್ಲಿ ಮಹತ್ವದ ಹಿನ್ನಡೆ ಎದುರಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಸಲ್ಲಿಸಿದ್ದ ದೂರು ಆಧಾರವಾಗಿ ದಾಖಲಾದ ಪ್ರಕರಣದಲ್ಲಿ ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಮೂರ್ತಿ ಪಾರ್ಥಿವಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠವು ಇತ್ತೀಚೆಗೆ ಎರಡೂ ಕಡೆ ವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಅಂತಿಮ ಆದೇಶ ನೀಡಿರುವ ನ್ಯಾಯಾಲಯ, ಖೇರಾಗೆ ಜಾಮೀನು ನೀಡಲು ನಿರಾಕರಿಸಿದೆ.

ಇದನ್ನೂ ಓದಿ:

ರಿನಿಕಿ ಶರ್ಮಾ ಅವರು, ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈಗಾಗಲೇ ಹಲವು ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಖೇರಾಗೆ, ಈ ತೀರ್ಪು ಮತ್ತೊಂದು ಒತ್ತಡ ತಂದಿದೆ.

ಇದೀಗ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದ್ದು, ಮುಂದಿನ ಕಾನೂನು ಕ್ರಮಗಳತ್ತ ಗಮನ ಸೆಳೆಯಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !