ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೋಷಿಯಲ್ ಮೀಡಿಯಾದಲ್ಲಿ ಆಧಾರ ರಹಿತವಾಗಿ ಅಭಿಯಾನ ಮಾಡಲಾಗುತ್ತಿದ್ದು, ಇದೆಲ್ಲಾ ಸುಡೋ ಕ್ಯಾಂಪೇನ್ಗಳು. ನನ್ನ ಮತ್ತು ರಾಜ್ಯದ ಹೆಸರು ಕೆಡಿಸುವ ಉದ್ದೇಶದಿಂದಲೇ ಈ ರೀತಿ ಪೋಸ್ಟರ್ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪೇ ಸಿಎಂ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲು ಮಾಡಲು ಹೇಳಿದ್ದೇನೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ದೇವೆಗೌಡರನ್ನು ಭೇಟಿ ಮಾಡಿ ವಾಪಸಾಗುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಸೋಷಿಯಲ್ ಮೀಡಿಯಾದಲ್ಲಿ ಆಧಾರರಹಿತವಾಗಿ ಅಭಿಯಾನ ಮಾಡಲಾಗುತ್ತಿದೆ . ಇದೆಲ್ಲಾ ಸುಡೋ ಕ್ಯಾಂಪೇನ್ಗಳು. ಇದರ ಬಗ್ಗೆ ಜನಕ್ಕೆ ಏನೂ ಗೊತ್ತಾಗಲ್ಲ ಎಂದು ಕಿಡಿಕಾರಿದರು. ನನಗಿಂತಲೂ ರಾಜ್ಯದ ಹೆಸರು ಕೆಡಿಸಲು ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ