ಬಿಜೆಪಿ ವಿರುದ್ಧ ಕೈ ನಾಯಕರ ಪೇ ಸಿಎಂ ಪೋಸ್ಟರ್ ಅಭಿಯಾನ: ಖಾಕಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ಶುರುಮಾಡಿದ್ದು, ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲು ಸಜ್ಜಾಗಿದ್ದಾರೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಈ ಆಂದೋಲನದಲ್ಲಿ ಶಾಸಕರೆಲ್ಲರೂ ಭಾಗಿಯಾಗುವಂತೆ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ತೆರಳುವ ಸಾಧ್ಯತೆ ದಟ್ಟವಾಗಿದ್ದು ಕೆಪಿಸಿಸಿ ಕಚೇರಿ ಹೊರಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಪಕ್ಷ ನಾಯಕ ಸಿದ್ಧರಾಮಯ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಕೆ ಎಸ್ ಆರ‍್ ಪಿ ತುಕಡಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣ, ಸರ್ಕಾರಿ ನಿವಾಸ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾಂಗ್ರೆಸ್ ಅಭಿಯಾನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ನಡೆಸಿದೆ. ಮತ್ತೊಂದೆಡೆ ಕಾರ್ಯಕರ್ತರು ಕೂಡ ನಗರದ ಹಲವೆಡೆ ಪೇ ಸಿಎಂ ಪೋಸ್ಟರ್ ಅಂಟಿಸುತ್ತಿರೋದನ್ನು ಗಮನಿಸಿದಂತ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!