ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್ ಡ್ರೈವ್ ಪ್ರಕರಣದಲ್ಲಿ 16 ವರ್ಷದ ಸಂತ್ರಸ್ತರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಹುಲ್ ಗಾಂಧಿಗೆ ಏಕೆ ನೋಟಿಸ್ ನೀಡಿಲ್ಲ ಎಂದು ವಿಶೇಷ ತನಿಖಾ ತಂಡವನ್ನು (ಎಸ್ ಐಟಿ) ಪ್ರಶ್ನಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿ ಮಹಾನುಭವ ಈ ಪ್ರಕರಣದಲ್ಲಿ 16 ವರ್ಷದ ಅಪ್ರಾಪ್ತರು ಇದ್ದಾರೆ ಎಂದು ಹೇಳಿದ್ದಾರೆ. ಇದು ಗಂಭೀರ ಆರೋಪ. ಪೋಕ್ಸೋ ಪ್ರಕರಣ ಸಾಬೀತಾದರೆ ಜೀವನಪರ್ಯಂತ ಜೈಲು ಶಿಕ್ಷೆಯಾಗುತ್ತದೆ. ಆದರೆ ಇನ್ನೂ ಒಬ್ಬ ಅಪ್ರಾಪ್ತ ವಯಸ್ಕನೂ ಏಕೆ ಹೇಳಿಕೆ ನೀಡಿಲ್ಲ? ರಾಹುಲ್ ಗಾಂಧಿ ಯಾವ ಆಧಾರದ ಮೇಲೆ ಈ ಹೇಳಿಕೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.