ದಿಗಂತ ವರದಿ ವಿಜಯಪುರ:
ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದು, ಪಕ್ಷವನ್ನು ಮೆಚ್ಚಿಕೊಂಡು ಹಲವರು ಬರುತ್ತಿದ್ದಾರೆ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ಆಪರೇಷನ್ ಹಸ್ತ ವಿಚಾರ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಲವಾರು ಮಾಜಿ ಶಾಸಕರು, ಮುಖಂಡರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂದರು. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೈ ಸೇರ್ಪಡೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ನಾವೇನು ಅವರಿಗೆ ಎದುರಾಳಿ ಅಲ್ಲ. ಮುನೇನಕೊಪ್ಪ ಅವರಿಗೆ ರಾಜಕೀಯದಲ್ಲಿ ಅನುಭವ ಇದೆ ಎಂದರು.
ಮುನೇನಕೊಪ್ಪ ಬಹಳಷ್ಟು ಅನುಭವಸ್ಥರು ಇದ್ದಾರೆ. ಪಕ್ಷಕ್ಕೆ ಬಲ ತುಂಬವರು ಪಕ್ಷಕ್ಕೆ ಬಂದರೆ ಸೇರಿಸಿಕೊಳ್ಳುತ್ತೇವೆ ಎಂದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ವೈಡ್ ಬಾಲ್ ಹಾಕ್ತಾರೆ. ಯತ್ನಾಳರ ಎಲ್ಲಾ ಬಾಲುಗಳು ವಿಕೆಟ್ ಹಾರುತ್ತವೇ ಎನ್ನುವ ಹಾಗಿಲ್ಲ. ಯತ್ನಾಳ ಹೇಳಿಕೆಯಿಂದ ಪಕ್ಷಕ್ಕೆ ಏನು ಆಗಲ್ಲ ಎಂದರು.