ಪ್ರಧಾನಿ ಮೋದಿ ಭರವಸೆಗಳನ್ನು ಜನರು ನಂಬಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಪ್ರಧಾನಿ ನರೇಂದ್ರ ಮೋದಿ ಅವರು ನೀಡುತ್ತಿರುವ ಭರವಸೆಗಳನ್ನು ರಾಜ್ಯದ ಜನರು ನಂಬುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬುಧವಾರ ಹೇಳಿದ್ದಾರೆ.

ಪಾಲಕ್ಕಾಡ್‌ನ ಪಟ್ಟಾಂಬಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಜನರು ಒಮ್ಮೆ ಮೋಸ ಹೋಗಬಹುದು. ಆದರೆ, ಅವರಿಗೆ ಪದೇ ಪದೇ ಮೋಸ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು

ಎರಡನೇ ಅವಧಿಯ ಯುಪಿಎ ಸರ್ಕಾರದ ಕುರಿತು ಜನರಲ್ಲಿ ಅತೃಪ್ತಿ ಇದ್ದಾಗ, ಹಲವಾರು ಭರವಸೆಗಳನ್ನು ನೀಡಿ ಮೋದಿ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರ ಕೂಡ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳನ್ನೇ ಜಾರಿಗೊಳಿಸಿದೆ’ ಎಂದರು.

ಭಾರತವನ್ನು ಧಾರ್ಮಿಕ ರಾಷ್ಟ್ರವನ್ನಾಗಿಸಲು ಬಿಜೆಪಿಯು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!