ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ದೆಹಲಿಗೆ ಬಜೆಟ್ ನಲ್ಲಿ ಕೇವಲ 325 ಕೋಟಿ ರೂಪಾಯಿ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಜನ ಕಳೆದ ವರ್ಷ 1.75 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದಾರೆ.ಆದ್ರೆ ನಮಗೆ ಸಿಕ್ಕಿದು ಕೇವಲ 325 ಕೋಟಿ ರೂಪಾಯಿ. ರಾಷ್ಟ್ರ ರಾಜಧಾನಿಯ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳಿಗೆ ಬಜೆಟ್ ಯಾವುದೇ ಪರಿಹಾರ ನೀಡಿಲ್ಲ ಎಂದಿದ್ದಾರೆ.
ಶಿಕ್ಷಣಕ್ಕೆ ನೀಡುವ ಅನುದಾನವನ್ನು ಶೇ.2.64 ರಿಂದ ಶೇ.2.5 ಕ್ಕೆ ಇಳಿಸಿರುವುದು ದುರದೃಷ್ಟಕರ. ಆರೋಗ್ಯ ಬಜೆಟ್ ಅನ್ನು ಶೇ. 2.2 ರಿಂದ ಶೇ. ಶೇಕಡಾ 1.98ಕ್ಕೆ ಇಳಿಸಿರುವುದು ಹಾನಿಕಾರಕ ಎಂದು ದೆಹಲಿ ಸಿಎಂ ಟ್ಟೀಟ್ ಮಾಡಿದ್ದಾರೆ.