ಜನರ ಧ್ವನಿ ಸರ್ಕಾರದ ಮೊದಲ ಕಾರ್ಯ: ಝಿರೋ ಟ್ರಾಫಿಕ್ ಬೇಡ ಎಂದ ನೂತನ ಸಿಎಂ ಒಮರ್ ಅಬ್ದುಲ್ಲಾ !

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಬಳಿಕ ಮಾತನಾಡಿದ ಅವರು, ಜನರ ಧ್ವನಿಯಾಗುವುದು ತಮ್ಮ ಸರ್ಕಾರದ ಮೊದಲ ಕಾರ್ಯವಾಗಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರವು ದೀರ್ಘಕಾಲದವರೆಗೆ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವುದಿಲ್ಲ ಮತ್ತು ಶೀಘ್ರದಲ್ಲೇ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರಳಿ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನರ ಸಮಸ್ಯೆಗಳನ್ನು ಪರಿಹರಿಸಲು ನಾವು ಜನಾದೇಶ ಪಡೆದಿದ್ದೇವೆ ಮತ್ತು ಅದನ್ನು ನಾವು ಮೊದಲ ದಿನದಿಂದಲೇ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

ಬಳಿಕ ಒಮರ್ ಅಬ್ದುಲ್ಲಾ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ X ನಲ್ಲಿ ಮೊದಲ ಪೋಸ್ಟ್ ಮಾಡಿದ್ದು,’ನಾನು ರಸ್ತೆಯ ಮೂಲಕ ಚಲಿಸುವಾಗ ಯಾವುದೇ “ಗ್ರೀನ್ ಕಾರಿಡಾರ್” ಅಥವಾ ಝಿರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕರಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ಮತ್ತು ಸೈರನ್‌ಗಳ ಬಳಕೆಯನ್ನು ಕಡಿಮೆ ಮಾಡಲು ನಾನು ಡಿಜಿಗೆ ಸೂಚಿಸಿದ್ದೇನೆ. ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಿಗೂ ಇದನ್ನು ಅನುಸರಿಸಲು ನಾನು ಹೇಳುತ್ತೇನೆ. ಎಲ್ಲದರಲ್ಲೂ ನಮ್ಮ ನಡವಳಿಕೆ ಜನಸ್ನೇಹಿಯಾಗಿರಬೇಕು. ನಾವು ಜನರ ಸೇವೆ ಮಾಡಲು ಬಂದಿದ್ದೇವೆಯೇ ಹೊರತು ಅವರಿಗೆ ತೊಂದರೆ ಕೊಡಲು ಅಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!