ಸುಗಂಧದ್ರವ್ಯ ಫ್ಯಾಕ್ಟರಿ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಭವಿಸಿದ ಸುಗಂಧದ್ರವ್ಯ ಫ್ಯಾಕ್ಟರಿ(perfume factory) ಯಲ್ಲಿ ಸ್ಫೋಟದಿಂದ ಮೂವರು ಸಾವನ್ನಪ್ಪಿದ್ದು, ಈ ಸಂಬಂಧ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(G Parameshwara) ಘೋಷಿಸಿದ್ದಾರೆ.

ಭಾನುವಾರ ಯಶವಂತಪುರದಲ್ಲಿ ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!