ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದ್ದು, ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಖಾಸಗಿಯಾಗಿ ಮೋಡ ಬಿತ್ತನೆಗೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ.
ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡಗೆ ಸೇರಿದ PKK ಎಂಬ ಎನ್ಜಿಓನಿಂದ ಮೋಡ ಬಿತ್ತನೆಗೆ ಜಿಲ್ಲಾಧಿಕಾರಿ ಮತ್ತು ಕಂದಾಯ ಇಲಾಖೆಯಿಂದ ಅನುಮತಿ ಸಹ ಪಡೆದುಕೊಳ್ಳಲಾಗಿದೆ. ಇನ್ನು ಕೇಂದ್ರ ವಿಮಾನಯಾನ ಇಲಾಖೆಯ ಅನುಮತಿ ಪಡೆದುಕೊಳ್ಳಲು NGO ಟೀಂ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಪರ್ಮಿಷನ್ ಸಿಕ್ಕ ಬಳಿಕ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ, ಬಹುತೇಕ ಈ ತಿಂಗಳಲ್ಲೇ ನಡೆಯಲಿದೆ.
ಮಳೆ ಕೊರೆತೆ ಇದೆ ಎಂದು IMD ಹೇಳಿದೆ. ಹಿಂದೆಯೂ ನಮ್ಮ ಜಿಲ್ಲೆಯಲ್ಲಿ ನಾವು ಮೋಡ ಬಿತ್ತನೆ ಮಾಡಲಾಗಿತ್ತು. ಮೋಡ ಬಿತ್ತನೆಯಿಂದ ಮಳೆಯಾಗಿದೆ. ಇದು ನಾನು ಹೇಳುತ್ತಿಲ್ಲ ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದ ವಿಜ್ಞಾನಿಗಳೇ ಹೇಳಿದ್ದಾರೆಎಂದು ಶಾಸಕ ಪ್ರಕಾಶ್ ಕೋಳಿವಾಡ ತಿಳಿಸಿದ್ದಾರೆ.
ಮಳೆ ಕೊರತೆಯಿಂದ ನದಿ, ಹಳ್ಳ-ಕೊಳ್ಳ, ಕೆರೆ ಕಟ್ಟೆಗಳ ಒಡಲು ಬರಿದಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕುಡಿವ ನೀರಿನ ಹಾಹಾಕಾರ ಮುಗಿಲು ಮುಟ್ಟುವ ಸಾಧ್ಯತೆಯೂ ಇದೆ. ಮೋಡಗಳನ್ನು ನಿಲ್ಲಿಸಿ ಮಳೆ ಸುರಿಸಲು ಮೋಡಬಿತ್ತನೆ ಮಾಡಲು ರೈತಾಪಿ ವರ್ಗದಿಂದ ಒತ್ತಾಯ ಕೇಳಿ ಬರುತ್ತಿದೆ. ಉತ್ತರ ಕರ್ನಾಟಕದ ಮಲಪ್ರಭಾ, ಘಟಪ್ರಭಾ, ವರದಾ, ಧರ್ಮಾ, ಕುಮದ್ವತಿ, ಕೃಷ್ಣೆಯ ಒಡಲು ಕೂಡ ಬರಿದಾಗುತ್ತಿದೆ. ಈ ನದಿಗಳನ್ನು ನೆಚ್ಚಿಕೊಂಡಿದೆ ಈ ಪ್ರದೇಶ. ಇವು ಬರಿದಾಗುತ್ತಿರುವುದು ಕುಡಿವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.