ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನ ಬಫರ್ ಝೋನ್ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಗಂಗಾರತಿ ಮಾದರಿಯಲ್ಲಿ ಹಮ್ಮಿಕೊಂಡ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ.
ನಗರದ ಕೆರೆಗಳ ಸಂರಕ್ಷಣೆ ಮತ್ತು ಕುರಿತಂತೆ ಗೀತಾ ಮಿಶ್ರಾ ಎಂಬವರು 2019ರಲ್ಲಿ ಸಲ್ಲಿಸಿರುವ ಅರ್ಜಿಯೊಂದಿಗೆ, ಮನವಿಯನ್ನು ವಿಚಾರಣೆ ನಡೆಸಬೇಕು ಎಂದು ವಕೀಲ ಜಿ.ಆರ್.ಮೋಹನ್ ವಿಷಯ ಪ್ರಸ್ತಾಪಿಸಿದರು.
ಅಲ್ಲದೆ, ಕಾವೇರಿ ಆರತಿಯ ಹಮ್ಮಿಕೊಳ್ಳುವ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಶೀಘ್ರ ವಿಚಾರಣೆಗೆ ಪರಿಗಣಿಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ವಿಚಾರಣೆ ವೇಳೆ ವಕೀಲರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಹಮ್ಮಿಕೊಳ್ಳುವುದಕ್ಕೆ ಅರ್ಜಿದಾರರಿಂದ ಯಾವುದೇ ಆಕ್ಷೇಪಣೆ ಇಲ್ಲ. ಆದರೆ, ಈ ಕಾಯಕ್ರಮಕ್ಕೆ ಕೆರೆಯ ಬಫರ್ ಝೋನ್ನಲ್ಲಿ ಕಾನೂನುಬಾಹಿರವಾಗಿ ತಾತ್ಕಾಲಿಕ ಸ್ಟೇಜ್ಗಳು ನಿರ್ಮಾಣವಾಗಲಿವೆ, ಇದಕ್ಕೆ ನಮ್ಮ ಆಕ್ಷೇಪಣೆ ಇದೆ ಎಂದು ಪೀಠಕ್ಕೆ ತಿಳಿಸಿದರು.