ಹೊಸದಿಗಂತ ವರದಿ,ಮಂಗಳೂರು:
ಕೇಂದ್ರ ಸರಕಾರ ಪಿಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಪಿಎಫ್ ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗೆ ಬೀಗ ಜಡಿಯಲಾಗಿದೆ.
ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಬುಧವಾರ ಕಾರ್ಯಾಚರಣೆ ನಡೆಯಿತು.
ನಗರದ ನೆಲ್ಲಿಕಾಯಿ ರಸ್ತೆಯ ವೆಸ್ಟ್ ಕೋಸ್ಟ್, ಪಿಎಫ್ಐ ಕಚೇರಿ, ಬಂದರು ಅಜೀಜುದ್ದೀನ್ ರಸ್ತೆಯಲ್ಲಿರುವ ಸಿಎಫ್ಐ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಬೀಗಮುದ್ರೆ ಹಾಕಲಾಯಿತು