ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್ತು ರಾಜರಾಜೇಶ್ವರಿ ನಗರದಲ್ಲಿ ನೂನವಾಗಿ ನಿರ್ಮಿಸಿರುವ ‘ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾಕೇಂದ್ರವನ್ನು ಸೋಮವಾರ ಸಂಜೆ ಜ್ಯೋತಿ ಉದ್ದೀಪನಗೊಳಿಸಿ ಉದ್ಘಾಟನೆ ಮಾಡಲಾಯಿತು. ಸಮಗ್ರ ಚಿಕಿತ್ಸಾ ಸೌಲಭ್ಯಗಳ ಹೊಸ ಪರಿಕಲ್ಪನೆಯೊಂದಿಗೆ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಾಕಾರಗೊಂಡಿದೆ.
ಕಾರ್ಯಕ್ರಮದಲ್ಲಿ ಇನ್ಪೋಸಿಸ್ ಫೌಂಡೇಶನ್ ನ ಸಂಸ್ಥಾಪಕಿ, ಮೂರ್ತಿ ಫೌಂಡೇಶನ್ ಅಧ್ಯಕ್ಷೆ, ಶ್ರೀಮತಿ ಸುಧಾಮೂರ್ತಿ, ಸುತ್ತೂರು ಮಠದ ದೇಶಿಕೇಂದ್ರ ಮಹಾಸ್ವಾಮೀಜಿ, ಮಾಜಿ ಸಿಎಂ ಯಡಿಯೂರಪ್ಪ, ನಾರಾಯಣ ಹೆಲ್ತ್ ನ ಸ್ಥಾಪಕ ಡಾ.ದೇವಿಪ್ರಸಾದ್ ಶೆಟ್ಟಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೋತ್ಥಾನ ಪರಿಷತ್ತಿನ ಅಧ್ಯಕ್ಷ ಶ್ರೀ ಎಂ.ಪಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಒಂದು ಝಲಕ್ ಇಲ್ಲಿದೆ.