ಫೋಟೋ ಕಳ್ಳತನ ಪ್ರಕರಣ : ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಪೊಲೀಸರ ವಶಕ್ಕೆ

ಹೊಸದಿಗಂತ ವರದಿ ಚಿತ್ರದುರ್ಗ:

ಮುರುಘಾಮಠದ ಫೋಟೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಘಾಮಠದ ರಾಜಾಂಗಣದಲ್ಲಿನ 47 ಫೋಟೋಗಳನ್ನು ಅಕ್ಟೋಬರ್ 6 ರಂದು ಕಳ್ಳತನ ಮಾಡಲಾಗಿತ್ತು. ಈ ಕೇಸ್ ನಲ್ಲಿ ಗ್ರಾಮಾಂತರ ಠಾಣೆ ಪೋಲೀಸರು ಕಳೆದ ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.

ಹೊಸಹಳ್ಳಿ ಗ್ರಾ.ಪಂ. ಸದಸ್ಯ ಮೋಹನ್ ಮೂರ್ತಿ ಎಸ್.ಜೆ.ಎಂ. ಕಾಲೇಜು ಶಿವಾನಂದಸ್ವಾಮಿ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಈ ಇಬ್ಬರು ಆರೋಪಿಗಳು ಎಸ್.ಕೆ.ಬಸವರಾಜನ್ ದಂಪತಿಯ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಫೋಟೋ ಕಳ್ಳತನ ಮಾಡುವಂತೆ ಎಸ್.ಕೆ.ಬಸವರಾಜನ್ ದಂಪತಿ ಪ್ರಚೋದನೆ ನೀಡಿದ್ದರು ಎಂದು ಈ ಇಬ್ಬರು ಆರೋಪಿಗಳು ಪೋಲೀಸರಿಗೆ ತಿಳಿಸಿದ್ದಾರೆ ಎನ್ನಲಾವಗಿದೆ. ಈ ಹಿನ್ನೆಯಲ್ಲಿ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದಲ್ಲದೇ ಮುರುಘಾ ಶರಣರ ವಿರುದ್ದ ಷಡ್ಯಂತ್ರ ನಡೆಸಲಾಗಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಸಹ ಪೊಲೀಸರು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!