ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೀಡುವ ಭರವಸೆಗಳನ್ನು ಕೇರಳದ ಜನತೆ ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಪಾಲಕ್ಕಾಡ್ ಪಟ್ಟಾಂಬಿಯಲ್ಲಿ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರವು ದೇಶದಲ್ಲಿ ಆರೆಸ್ಸೆಸ್ ಕಾರ್ಯಸೂಚಿ ಅನುಷ್ಠಾನಗೊಳಿಸುತ್ತಿದೆ.
ಎರಡನೇ ಅವಧಿಯ ಯುಪಿಎ ಸರ್ಕಾರದ ಬಗ್ಗೆ ಜನರಲ್ಲಿ ಅತೃಪ್ತಿ ಉಂಟಾದ ಕಾರಣ 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಮೋದಿ ಸರ್ಕಾರ ಕೂಡ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳನ್ನೇ ಜಾರಿಗೊಳಿಸಿದೆ ಎಂದ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಉಲ್ಲೇಖಿಸದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.