ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲಿವುಡ್ನ ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳ ತಡೆಗೆ ಸಮಿತಿ ರಚಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಇಂದು ನಟ ಚೇತನ್ ನೇತೃತ್ವದ ‘ಫೈರ್’ ಸಂಸ್ಥೆ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ.
ಸ್ಯಾಂಡಲ್ವುಡ್ ನಟರಾದ ಸುದೀಪ್, ರಮ್ಯಾ, ಶ್ರದ್ಧಾ ಶ್ರೀನಾಥ್, ನೀತು, ಚೇತನ್ ಅಂಹಿಸಾ ಸೇರಿದಂತೆ 140ಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು ಮತ್ತು ಸಾಹಿತಿಗಳು ಇದಕ್ಕೆ ಬೆಂಬಲ ಸೂಚಿಸಿದ್ದಾರೆ. ಸದ್ಯದಲ್ಲೇ ಸಮಿತಿ ರಚನೆಯ ಕುರಿತು ಚರ್ಚಿಸಿ ನಿರ್ಧಾರಕ್ಕೆ ಬರೋಣ ಎಂದು ಸಿಎಂ ‘ಫೈರ್’ ತಂಡಕ್ಕೆ ಭರವಸೆ ನೀಡಿದ್ದಾರೆ.
ಸೆ.10ರ ಬಳಿಕ ಮತ್ತೊಮ್ಮೆ ಸಭೆ ಮಾಡೋಣ ಎಂದು `ಫೈರ್’ ತಂಡಕ್ಕೆ ತಿಳಿಸಿದ್ದಾರೆ. ಇನ್ನೂ ಸಿಎಂ ಜೊತೆಗಿನ ಸಭೆಯಲ್ಲಿ ನಟ ಚೇತನ್ ಜೊತೆ ನೀತು ಶೆಟ್ಟಿ, ಶೃತಿ ಹರಿಹರನ್, ಹಿರಿಯ ಪತ್ರಕರ್ತೆ ವಿಜಯಮ್ಮ ಭಾಗಿಯಾಗಿದ್ದರು.