ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧವನ್ನು ಪಾಕಿಸ್ತಾನವಾಗಲು ಬಿಡಬೇಡಿ. ದಯವಿಟ್ಟು ಪಾಕಿಸ್ತಾನಿಗಳನ್ನು ಕರೆತಂದು ವಿಧಾನಸೌಧವನ್ನು ಭಯೋತ್ಪಾದಕ ವಸತಿಗೃಹವನ್ನಾಗಿ ಮಾಡಬೇಡಿ ಎಂದು ಆರ್. ಅಶೋಕ್ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆ ಕೂಗಿದವರ ಮೇಲೆ 40 ಗಂಟೆಗಳ ಮೇಲೂ ಕ್ರಮ ಯಾಕೆ ಕೈಗೊಳ್ಳಲಾಗಿಲ್ಲ ಎಂದು ಅಶೋಕ್ ಪ್ರಶ್ನಿಸಿದರು.
ಮಾಧ್ಯಮಗಳು ಭಯವಿಲ್ಲದೆ ಕೆಲಸ ಮಾಡುತ್ತಿವೆ. ಆದರೆ ಈಗ ಅವರನ್ನೂ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅಶೋಕ್ ಹೇಳಿದ್ದಾರೆ.