ಪ್ಲೀಸ್ ಕಾಶ್ಮೀರಿಗಳು ನಿಮ್ಮ ಶತ್ರುಗಳೆಂದು ಭಾವಿಸಬೇಡಿ: ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಶ್ಮೀರಿಗಳು ನಿಮ್ಮ ಶತ್ರುಗಳು ಎಂಬ ಭಾವನೆಗೆ ಒಳಗಾಗಬೇಡಿ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ದೇಶದ ಜನರಿಗೆ ಮನವಿ ಮಾಡಿದ್ದಾರೆ.

ದಾಳಿಯಲ್ಲಿನ ಸಂತ್ರಸ್ತರೊಂದಿಗೆ ನಾವಿದ್ದೇವೆ ಮತ್ತು ಈ ಘಟನೆಗೆ ಕಾಶ್ಮೀರಿಗಳನ್ನು ದೂಷಿಸುವುದನ್ನು ನಿಲ್ಲಿಸುವಂತೆ ದೇಶದ ಜನರಿಗೆ ಮನವಿ ಮಾಡಿದರು. ದಾಳಿಯನ್ನು ಖಂಡಿಸಿ ವಿರೋಧ ವ್ಯಕ್ತಪಡಿಸಿದ ಕಾಶ್ಮೀರಿ ಜನರ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಇದು ಸ್ಥಳೀಯ ಜನರಿಂದ ಆಗಿದ್ದಲ್ಲ, ಬಾಹ್ಯ ಅಂಶಗಳಿಂದ ನಡೆಸಲ್ಪಟ್ಟ ದಾಳಿಯಾಗಿದೆ ಎಂದು ಹೇಳಿದರು.

ಇಂತಹ ದುರಂತ ಘಟನೆಯನ್ನು ಎದುರಿಸಬೇಕಾದ ಸಂತ್ರಸ್ತ ಕುಟುಂಬಗಳಿಗೆ ನಾನು ಒಗ್ಗಟ್ಟನ್ನು ತೋರಿಸಲು ಬಯಸುತ್ತೇನೆ… ಇಲ್ಲಿಗೆ ತಮ್ಮ ರಜೆಯನ್ನು ಆನಂದಿಸಲು ಬಂದ ನಮ್ಮ 25 ಅತಿಥಿಗಳು ಅಥವಾ ಅಲ್ಲಿನ ಜನರನ್ನು ರಕ್ಷಿಸಲು ತನ್ನ ಪ್ರಾಣ ತ್ಯಾಗ ಮಾಡಿದ ನಮ್ಮ ಕಣಿವೆಯ ಒಬ್ಬ ವ್ಯಕ್ತಿಯ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ದಾಳಿಯನ್ನು ಖಂಡಿಸಿದ ಕಾಶ್ಮೀರದ ಜನರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಅಬ್ದುಲ್ಲಾ ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!