ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.
ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದ್ದರು.