ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆ ಕಲಾಪದಲ್ಲಿ ವಿದಾಯದ ಮಾತುಗಳನ್ನಾಡಿದ್ದು, ಎಲ್ಲರ ಕಣ್ಣಾಲೆಯಲ್ಲಿ ನೀರು ತರಿಸುವಂತಿತ್ತು.
ಈ ಮಾತುಗಳಿಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೆಷ್ಟೋ ಹೊಸ ಕಾರ್ಯಕರ್ತರಿಗೆ ಹೊಸ ಹುರುಪು, ಹೊಸ ಶಕ್ತಿಯನ್ನು ನಿಮ್ಮ ಮಾತುಗಳು ನೀಡಿವೆ. ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ, ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುವ ಭಾಷಣವಾಗಿದೆ ಎಂದಿದ್ದಾರೆ.
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz
— Narendra Modi (@narendramodi) February 24, 2023