ರೋಜ್‌ಗಾರ್ ಮೇಳ: ಹೊಸದಾಗಿ 70,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಇಂದು ಶನಿವಾರ ಹೊಸದಾಗಿ ಸೇರ್ಪಡೆಗೊಂಡ ಯುವಕರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 70,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವಾಗ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಈ ದೇಶದ ಜನತೆ ಸಂಕಲ್ಪ ಕೈಗೊಂಡಿದ್ದಾರೆ’ ಎಂದರು.

ʻಮುಂದಿನ 25 ವರ್ಷಗಳು ಭಾರತಕ್ಕೆ ಅತ್ಯಂತ ಮಹತ್ವʼದ್ದಾಗಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ತಮ್ಮ ಆಡಳಿತದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಭಾರಿ ವಿನಾಶಕ್ಕೆ ಸಾಕ್ಷಿಯಾಯಿತು. ಆದರೆ, ಇಂದು ಭಾರತವು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಆದರೆ 9 ವರ್ಷಗಳ ಹಿಂದಿನ ಪರಿಸ್ಥಿತಿ ಹೀಗಿರಲಿಲ್ಲ, ಭಾರಿ ವಿನಾಶವನ್ನು ಕಂಡಿತ್ತು. ಇಂದು ನಾವು ಡಿಜಿಟಲ್ ವಹಿವಾಟುಗಳನ್ನು ಮಾಡಲು ಸಮರ್ಥರಾಗಿದ್ದೇವೆ ಆದರೆ 9 ವರ್ಷಗಳ ಹಿಂದೆ ಫೋನ್ ಬ್ಯಾಂಕಿಂಗ್ 140 ಕೋಟಿ ಜನರಿಗೆ ಇರಲಿಲ್ಲ ಎಂದರು.

ದೇಶಾದ್ಯಂತ 44 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿತ್ತು. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ವಿವಿಧ ಇಲಾಖೆಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ.

ದೇಶದಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಕಂದಾಯ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ಜಲಸಂಪನ್ಮೂಲ ಇಲಾಖೆ, ಟ್ರಾನ್ ಗೃಹ ಸಚಿವಾಲಯ ಮತ್ತು ಇತರ ಇಲಾಖೆಗಳು ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಸರ್ಕಾರಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!