ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಸಮಸ್ತ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳನ್ನು ತಿಳಿಸಿದ್ದಾರೆ.
ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ದೇಶದ ಜನತೆಗೆ ಬುದ್ಧ ಪೂರ್ಣಿಮೆಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಅವರು, ಭಗವಾನ್ ಬುದ್ಧನ ಆದರ್ಶಗಳನ್ನು ಸಾಕಾರಗೊಳಿಸುವ ನಮ್ಮ ಬದ್ಧತೆ ಬಹಳ ದೃಢವಾಗಿದೆ. ಅವರ ವಿಚಾರಗಳು ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಒಗ್ಗಟ್ಟಿನ ಭಾವನೆಯನ್ನು ಮತ್ತಷ್ಟು ಆಳಗೊಳಿಸಲಿ ಎಂದು ತಿಳಿಸಿದ್ದಾರೆ.



