ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ದಿನಾಚರಣೆ ಅಂಗವಾಗಿ ರಾಜ್ಯದ ಸಮಸ್ತ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ರಾಜ್ಯವು ರಾಷ್ಟ್ರೀಯ ಪ್ರಗತಿಗೆ ಅದ್ಭುತ ಕೊಡುಗೆಗಳನ್ನು ನೀಡಿದೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಪ್ರಧಾನಿ ಮೋದಿ ಹೊಗಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಮಹಾರಾಷ್ಟ್ರ ದಿನವನ್ನು ಸಾಮಾನ್ಯವಾಗಿ ಮಹಾರಾಷ್ಟ್ರ ದಿವಸ್ ಎಂದು ಕರೆಯಲಾಗುತ್ತದೆ, ಇದನ್ನು “ಬಾಂಬೆ” ರಾಜ್ಯವನ್ನು ಭಾಷಾವಾರು ಆಧಾರದ ಮೇಲೆ ಎರಡು ರಾಜ್ಯಗಳಾಗಿ ವಿಭಜಿಸುವುದನ್ನು ಗುರುತಿಸಲು ಆಚರಿಸಲಾಗುತ್ತದೆ. (ಗುಜರಾತ್ ಮತ್ತು ಮಹಾರಾಷ್ಟ್ರ) ಬಾಂಬೆ ಮರುಸಂಘಟನೆ ಕಾಯಿದೆ ಮೇ 1, 1960 ರಂದು ಜಾರಿಗೆ ಬಂದಿತು, ಹಲವಾರು ಪ್ರತಿಭಟನೆಗಳು ಮತ್ತು ಚಳುವಳಿಗಳ ಪರಿಣಾಮವಾಗಿ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಲಾಯಿತು.
ಇಂದು ಗುಜರಾತ್ನ ಸಂಸ್ಥಾಪನಾ ದಿನ ಕೂಡಾ ಆದದ್ದರಿಂದ ಪ್ರಧಾನಿ ಮೋದಿ ಶುಭಾಶಯಗಳನ್ನು ಕೋರಿದರು, ಗುಜರಾತಿ ಜನರು ತಮ್ಮ ವೈವಿಧ್ಯಮಯ ಸಾಧನೆಗಳಿಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ ಎಂದರು. ಜೊತೆಗೆ ಅಂತಾರಾಷ್ಟ್ರೀಯ ಕಾರ್ಮಿಕರ ದಿನಚಾರಣೆ ಪ್ರಯುಕ್ತ ಎಲ್ಲಾ ಕಾರ್ಮಿಕರಿಗೂ ಶುಭಾಶಯ ತಿಳಿಸಿದ್ದಾರೆ.