ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನಾ ಕಾರ್ಯಕ್ರಮಗಳ ಹಿನ್ನೆಲೆ ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮಿಸಿದ್ದು, ಚಿಕ್ಕಬಳ್ಳಾಪುರಲ್ಲಿ ಮೊದಲ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂಧನ್ ಸಾಯಿ ವೈದ್ಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.
ತದನಂತರ ಬೆಂಗಳೂರಿನಲ್ಲಿ ವೈಟ್ಫೀಲ್ಡ್-ಕೆ.ಆರ್ ಪುರ ಮೆಟ್ರೋ ಉದ್ಘಾಟನೆ ಮಾಡಲಿದ್ದು, ನಂತರ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ. ಸದ್ಯ ಬೆಂಗಳೂರು ಮೆಟ್ರೋ ಮದುವಣಗಿತ್ತಿಯಂತೆ ತಯಾರಾಗಿದ್ದು, ಕೆಲವೇ ಸಮಯದಲ್ಲಿ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ.