ಪ್ರಧಾನಿ ಮೋದಿ ಸೇಮ್‌ ಹಿಟ್ಲರ್‌ ಇದ್ದಂತೆ: ಸಿಎಂ ಸಿದ್ದರಾಮಯ್ಯ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಪ್ರಧಾನಿ ಮೋದಿ ಹಿಟ್ಲರ್‌ ರೀತಿ ಸರ್ವಾಧಿಕಾರ ನಡೆಸ್ತಿದ್ದಾರೆ, ನಮ್ಮ ಬ್ಯಾಂಕ್‌ ಖಾತೆಗಳಿಗೆ ಮುಟ್ಟುಗೋಲು ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯೀಂದ ನರೇಂದ್ರ ಮೋದಿ ಸರ್ಕಾರ ಈ ರೀತಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದೆ ಎಂದಿದ್ದಾರೆ.

ಡಿಕೆ ಶಿವಕುಮಾರ್‌ ಮಾತನಾಡಿ ನಾವು ಒಟ್ಟಾರೆ ರಾಜ್ಯದಲ್ಲಿ ೮೭ ಲಕ್ಷ ಪಕ್ಷದ ಸದಸ್ಯತ್ವ ನೀಡಿ ಎಲ್ಲರಿಂದ ಹತ್ತು ರೂಪಾಯಿ ಸಂಗ್ರಹಿಸಿದ್ದೆವು. ಇನ್ನು ರಾಜ್ಯದಲ್ಲಿ ಯುವ ಸದಸ್ಯತ್ವದಿಂದ ೯೦ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದೇವೆ. ಇದನ್ನು ನಮಗೆ ನೀಡುತ್ತಿಲ್ಲ. ಮುಟ್ಟುಗೋಲು ಹಾಕಿಕೊಂಡು ಕೂತಿದೆ. ನ್ಯಾಯಾಲಯದಲ್ಲೂ ನಮಗೆ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!