ಪಶ್ಚಿಮ ಬಂಗಾಳದಲ್ಲಿ ಅನಿಲ ವಿತರಣಾ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಅಲಿಪುರ್ದಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

1010 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಯೋಜನೆಯು, ಸರ್ಕಾರ ನಿಗದಿಪಡಿಸಿದ ಕನಿಷ್ಠ ಕೆಲಸದ ಕಾರ್ಯಕ್ರಮ ಗುರಿಗಳಿಗೆ ಅನುಗುಣವಾಗಿ ಸುಮಾರು 19 CNG ಕೇಂದ್ರಗಳನ್ನು ಸ್ಥಾಪಿಸುವ ಮೂಲಕ 2.5 ಲಕ್ಷಕ್ಕೂ ಹೆಚ್ಚು ಮನೆಗಳು, 100 ಕ್ಕೂ ಹೆಚ್ಚು ವಾಣಿಜ್ಯ ಸಂಸ್ಥೆಗಳು ಮತ್ತು ಕೈಗಾರಿಕೆಗಳಿಗೆ ಪೈಪ್ಡ್ ನೈಸರ್ಗಿಕ ಅನಿಲ ಮತ್ತು ವಾಹನ ಸಂಚಾರಕ್ಕೆ ಸಂಕುಚಿತ ನೈಸರ್ಗಿಕ ಅನಿಲ ಒದಗಿಸುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ವರ್ಷಗಳಲ್ಲಿ ಭಾರತ ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ ಎಂದು ಹೇಳಿದರು,

“ಇಂದು, ನಮ್ಮ ದೇಶವು ಇಂಧನ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುನ್ನಡೆಯುತ್ತಿದೆ… ನಗರ ಅನಿಲ ವಿತರಣಾ ಜಾಲವು 5,520 ಕ್ಕೂ ಹೆಚ್ಚು ಜಿಲ್ಲೆಗಳನ್ನು ತಲುಪಿದೆ… ಸಿಎನ್‌ಜಿ ಸಾರಿಗೆಯಲ್ಲೂ ಬದಲಾವಣೆಯನ್ನು ತಂದಿದೆ. ಮಾಲಿನ್ಯ ಕಡಿಮೆಯಾಗುತ್ತಿದೆ. ಆದ್ದರಿಂದ ಜನರ ಆರೋಗ್ಯ ಸುಧಾರಿಸುತ್ತಿದೆ ಮತ್ತು ಅವರ ಜೇಬಿನ ಮೇಲಿನ ಹೊರೆ ಕಡಿಮೆಯಾಗುತ್ತಿದೆ… ಇಂದು ದೇಶದಲ್ಲಿ 31 ಕೋಟಿಗೂ ಹೆಚ್ಚು ಜನರು ಎಲ್‌ಪಿಜಿ ಸಂಪರ್ಕಗಳನ್ನು ಹೊಂದಿದ್ದಾರೆ. ಪ್ರತಿ ಮನೆಗೆ ಅನಿಲ ವಿತರಿಸುವ ಕನಸು ಈಗ ನನಸಾಗುತ್ತಿದೆ. ಇದಕ್ಕಾಗಿ, ನಮ್ಮ ಸರ್ಕಾರ ಅನಿಲ ವಿತರಣಾ ಜಾಲವನ್ನು ಬಲಪಡಿಸಿದೆ” ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!