ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ಪ್ರಧಾನಿ ಭೇಟಿ: ಹುತಾತ್ಮ ಯೋಧರಿಗೆ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶ 74ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯ ಪಥಕ್ಕೆ ತೆರಳುವ ಮೊದಲು ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಹುತಾತ್ಮ ಯೋಧರಿಗೆ ತಮ್ಮ ನಮನ ಸಲ್ಲಿಸಿದರು. ಮಡಿದ ವೀರಯೋಧರಿಗೆ ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ರಾಷ್ಟ್ರವನ್ನು ಮುನ್ನಡೆಸಿದರು.

ಈ ವೇಳೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಮೂರು ಪಡೆಗಳ ಮುಖ್ಯಸ್ಥರೂ ಕೂಡ ಅಮರ್‌ ಜವಾನ್‌ ಜ್ಯೋತಿಗೆ ಗೌರವ ನಮನ ಅರ್ಪಿಸಿದರು. ದೇಶ ಸೇವೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟ ವೀರ ಯೋಧರಿಗೆ ಇಂದು ನಮನ ಸಲ್ಲಿಸಲಾಯಿತು.

ಪ್ರಧಾನಮಂತ್ರಿಯವರು ಡಿಜಿಟಲ್ ವಿಸಿಟರ್ಸ್ ಬುಕ್ ಆಫ್ ದಿ ನ್ಯಾಷನಲ್ ವಾರ್ ಮೆಮೋರಿಯಲ್ ನಲ್ಲಿ ತಮ್ಮ ಅಭಿಪ್ರಾಯವನ್ನ ಬರೆದರು.  ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವಾರ್ಪಣೆ ಸಮಾರಂಭದೊಂದಿಗೆ ಗಣರಾಜ್ಯೋತ್ಸವ ಆಚರಣೆಗಳು ದೆಹಲಿಯಲ್ಲಿ ಆರಂಭಗೊಂಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!