ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಭಜನೆಯ ಸಂಸ್ಮರಣಾ ದಿನದಂದು ಪ್ರಧಾನಿ ಮೋದಿ ವಿಭಜನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ವಿಭಜನೆಯ ಕರಾಳ ನೆನಪಿನ ದಿನವಾದ ಇಂದು ಆ ಅವಧಿಯಲ್ಲಿ ಪ್ರಾಣತೆತ್ತವರಿಗೆ ಶ್ರದ್ಧಾಂಜಲಿ ಕೋರಿದ್ದಾರೆ.
ದೇಶ ವಿಭಜನೆಯಲ್ಲಿ ಪ್ರಾಣತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ದಿನವೇ ವಿಭಜನೆಯ ಸಂಸ್ಮರಣ ದಿನವಾಗಿದೆ. ಈ ದಿನದಂದು ಸ್ಥಳಾಂತರದ ಭಾರವನ್ನು ಹೊರಲು ಒತ್ತಾಯಿಸಲ್ಪಟ್ಟವರ ನೋವು ಹಾಗೂ ಹೋರಾಟವನ್ನು ನೆನೆಯಬೇಕು. ಎಲ್ಲರಿಗೂ ನಮಸ್ಕರಿಸುತ್ತೇನೆ ಎಂದಿದ್ದಾರೆ.
1947ರಲ್ಲಿ ಬ್ರಿಟಿಷ್ ಭಾರತವನ್ನು ಭಾರತ ಹಾಗೂ ಪಾಕಿಸ್ತಾನ ಎನ್ನುವ ಪ್ರತ್ಯೇಕ ರಾಷ್ಟ್ರಗಳಾಗಿ ವಿಭಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಾವಿರಾರು ಜನರು ಪ್ರಾಣತ್ಯಾಗಮಾಡಿದ್ದಾರೆ.
विभाजन विभीषिका स्मृति दिवस उन भारतवासियों को श्रद्धापूर्वक स्मरण करने का अवसर है, जिनका जीवन देश के बंटवारे की बलि चढ़ गया। इसके साथ ही यह दिन उन लोगों के कष्ट और संघर्ष की भी याद दिलाता है, जिन्हें विस्थापन का दंश झेलने को मजबूर होना पड़ा। ऐसे सभी लोगों को मेरा शत-शत नमन।
— Narendra Modi (@narendramodi) August 14, 2023