ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಪ್ರಧಾನಿ ಮೋದಿ ಪ್ರಚಾರ ರದ್ದಾಗಿದೆ ಎಂದು ತಿಳಿದುಬಂದಿದೆ. ಕಲಬುರಗಿ ಬಳಿಯ ಚಿತ್ತಾಪುರದಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.
ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧಪ್ರಕರಣಗಳಿವೆ, ಈ ರೀತಿ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಬೇರೆ ಪಕ್ಷಗಳು ಲೇವಡಿ ಮಾಡಿವೆ. ಈ ಬೆನ್ನಲ್ಲೇ ರಾಠೋಡ್ ವಿರುದ್ಧ ಕಳ್ಳತನದ ಪ್ರಕರಣವೊಂದು ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ರದ್ದಾಗಿದೆ ಎನ್ನಲಾಗಿದೆ. ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳುವು ಮಾಡಿದ ಆರೋಪ ಸಾಬೀತಾಗಿದ್ದು, ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ ನಡೆಯುವುದಿಲ್ಲ.