ದೆಹಲಿಗೆ ಬಂದೊಡನೆ ಎಲ್‌ಜಿಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾಹಿತಿ ಪಡೆದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಮುನಾ ನದಿಯ ಪ್ರವಾಹದಿಂದಾಗಿ ನಾಲ್ಕು ದಿನಗಳಿಂದ ರಾಷ್ಟ್ರ ರಾಜಧಾನಿ ಜಲ ದಿಗ್ಬಂಧನದಲ್ಲಿದೆ. ದೆಹಲಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಮುನಾ ನದಿಯ ಪ್ರವಾಹದಿಂದಾಗಿ ಹಲವು ಕಾಲೋನಿಗಳು ಮುಳುಗಿವೆ. ಫ್ರಾನ್ಸ್ ಪ್ರವಾಸದಿಂದ ವಾಪಸಾದ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕರೆಸಿ ದೆಹಲಿಯಲ್ಲಿ ಯಮುನಾ ನದಿ ಪ್ರವಾಹ, ಭಾರೀ ಮಳೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಸಂತ್ರಸ್ತರಿಗೆ ಎಲ್ಲ ರೀತಿಯಿಂದಲೂ ಬೆಂಬಲ ನೀಡುವಂತೆ ಸೂಚಿಸಲಾಗಿದೆ.

ಸಂತ್ರಸ್ತರಿಗೆ ಎಲ್ಲ ರೀತಿಯಿಂದಲೂ ಬೆಂಬಲ ನೀಡುವಂತೆ ಸೂಚಿಸಲಾಗಿದೆ. ರಾಜ್ಯಪಾಲ ವಿಕೆ ಸಕ್ಸೇನಾಗೆ ಕರೆ ಮಾಡಿ, ದೆಹಲಿಯ ಪ್ರವಾಹ ಪರಿಸ್ಥಿತಿ ಮತ್ತು ಅದನ್ನು ಎದುರಿಸಲು ಜನರಿಗೆ ಕೈಗೊಂಡ ರಕ್ಷಣಾ ಕ್ರಮಗಳ ಬಗ್ಗೆ ದೂರವಾಣಿಯಲ್ಲಿ ವಿಚಾರಿಸಿದರು. ಈ ವಿಷಯವನ್ನು ಸಕ್ಸೇನಾ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ತಿಳಿಸಿದ್ದಾರೆ.

ಶನಿವಾರ ದೆಹಲಿಯಲ್ಲಿ ಮಳೆಯಿಂದಾಗಿ ಅಧಿಕಾರಿಗಳು ಭೈರೋನ್ ಮಾರ್ಗದಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಿದ್ದಾರೆ. ಮತ್ತೊಂದೆಡೆ, ಕೇಂದ್ರ ದೆಹಲಿ ಮತ್ತು ಪೂರ್ವ ದೆಹಲಿಗೆ ಸಂಪರ್ಕ ಕಲ್ಪಿಸುವ ವಿಕಾಸ್ ಮಾರ್ಗವನ್ನು ಮುಚ್ಚಿರುವುದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!