ರಾಜ್ಯಕ್ಕೆ ನಾಳೆ ಮತ್ತೆ ಪ್ರಧಾನಿ ಮೋದಿ ಭೇಟಿ: ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯಕ್ಕೆ ನಾಳೆ ಮತ್ತೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ(Chikballapura) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬುರವರ ಪರ ಚುನಾವಣಾ ಪ್ರಚಾರ ನಡೆಸಲು ನಾಳೆ (ಏ.20) ಮಧ್ಯಾಹ್ನ 3.30 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಚಿಕ್ಕಬಳ್ಳಾಪುರ ಆಗಮಿಸಲಿದ್ದಾರೆ.

ಮೋದಿಯವರ ಕಾರ್ಯಕ್ರಮದ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 50 ಎಕರೆ ಜಮೀನಿನಲ್ಲಿ ವಿಶಾಲವಾದ ಪೆಂಡಲ್ ಹಾಗೂ ಹೆಲಿಪ್ಯಾಡ್‍ಗಳ ನಿರ್ಮಾಣ ಮಾಡಲಾಗಿದೆ.ಸುಮಾರು 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, 30ಕ್ಕೂ ಹೆಚ್ಚು ಶೌಚಾಲಯ, ಬೃಹತ್ ಎಲ್‍ಇಡಿ ಪರದೆಗಳು, ಪೆಂಡಲ್, ಪಾರ್ಕಿಂಗ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಕೇಂದ್ರವಲಯ ಐಜಿಪಿಯವರ ನೇತೃತ್ವದಲ್ಲಿ ಎಸ್‍ಪಿ, ಎಎಸ್‍ಪಿ ಸೇರಿದಂತೆ ಭದ್ರತೆಗಾಗಿ 450 ಪೊಲೀಸರಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ವೇದಿಕೆಯ ಹಿಂಭಾಗ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‍ನಲ್ಲಿ ಲ್ಯಾಂಡ್ ಆಗಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿನ ಅರಮನೆ ಮೈದಾನಕ್ಕೆ ತೆರಳಲಿದ್ದಾರೆ.

ಇನ್ನು ಮೋದಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಬಿ.ಎಸ್.ವೈ, ಬಿ.ವೈ ವಿಜೇಯಂದ್ರ ಹಾಗೂ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!