ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಹಿಂದೆಂದೂ ಕಂಡಿರದಂತಹ ಭೀಕರ ರೈಲು ಅಪಘಾತ ಸಂಭವಿಸಿದ್ದು, ಪ್ರಧಾನಿ ಮೋದಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಉನ್ನತ ಮಟ್ಟದ ಸಭೆಯ ನಂತರ ಪ್ರಧಾನಿ ಮೋದಿ ಒಡಿಶಾ ಬರುವ ತೀರ್ಮಾನ ಮಾಡಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಒಡಿಶಾಗೆ ಬರಲಿದ್ದಾರೆ. ಅಪಘಾತದಲ್ಲಿ ಮೃತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ನಿನ್ನೆಯಿಂದಲೇ ಜಾರಿಯಲ್ಲಿದ್ದ ರಕ್ಷಣಾ ಕಾರ್ಯಾಚರಣೆ ಇದೀಗ ಮುಕ್ತಾಯವಾಗಿದ್ದು, ಒಟ್ಟು 1,150 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ನಡೆದ ಕಾರ್ಯಾಚರಣೆ ವೇಳೆ 250 ಮಂದಿ ಗಾಯಗೊಂಡ ಪ್ರಯಾಣಿಕರು ದೊರಕಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶದಲ್ಲೇ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದೆ.