ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬದ ಸಂದರ್ಭ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ತಮ್ಮ ಜನ್ಮಸ್ಥಳ ಗುಜರಾತ್ನ ಪಾಲಿಟಾನಾದಿಂದ 40 ಕ್ಷಯರೋಗ (ಟಿಬಿ) ರೋಗಿಗಳನ್ನು ದತ್ತು ಪಡೆದರು.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಂಡವಿಯಾ ಅವರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುವಂತೆ ಜನರನ್ನು ಮನವಿ ಮಾಡಿದರು.
ʻಇಂದು ಪ್ರಧಾನಿ ಮೋದಿಯವರ ಜನ್ಮದಿನದಂದು ನಾನು ನನ್ನ ಜನ್ಮಸ್ಥಳ ಪಾಲಿತಾನಾದಿಂದ 40 ಕ್ಷಯರೋಗಿಗಳನ್ನು ದತ್ತು ಪಡೆದಿದ್ದೇನೆ. ನಾವೆಲ್ಲರೂ ಮೋದಿಜಿಯವರ ಈ ಮಾನವೀಯತೆಯ ಸೇವಾ ಕಾರ್ಯಕ್ಕೆ ಕೈಜೋಡಿಸೋಣ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಟಿಬಿ ಮುಕ್ತ ಭಾರತವನ್ನು ನಿರ್ಮಿಸೋಣ. ನೀವೂ ಸಹ ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
‘ಟಿಬಿ ಫ್ರೀ ವರ್ಕ್ಪ್ಲೇಸ್ ಕ್ಯಾಂಪೇನ್’ ಉಪಕ್ರಮದ ಮೂಲಕ 2025 ರ ವೇಳೆಗೆ ಭಾರತದಿಂದ ಟಿಬಿಯನ್ನು ನಿರ್ಮೂಲನೆ ಮಾಡುವ ಸರ್ಕಾರದ ಪ್ರಯತ್ನದೊಂದಿಗೆ CII ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.