ಪ್ರಧಾನಿ ಮೋದಿ ಜನ್ಮದಿನ: 40 ಕ್ಷಯ ರೋಗಿಗಳನ್ನು ದತ್ತು ಪಡೆದ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬದ ಸಂದರ್ಭ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ತಮ್ಮ ಜನ್ಮಸ್ಥಳ ಗುಜರಾತ್‌ನ ಪಾಲಿಟಾನಾದಿಂದ 40 ಕ್ಷಯರೋಗ (ಟಿಬಿ) ರೋಗಿಗಳನ್ನು ದತ್ತು ಪಡೆದರು.
ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಂಡವಿಯಾ ಅವರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುವಂತೆ ಜನರನ್ನು ಮನವಿ ಮಾಡಿದರು.
ʻಇಂದು ಪ್ರಧಾನಿ ಮೋದಿಯವರ ಜನ್ಮದಿನದಂದು ನಾನು ನನ್ನ ಜನ್ಮಸ್ಥಳ ಪಾಲಿತಾನಾದಿಂದ 40 ಕ್ಷಯರೋಗಿಗಳನ್ನು ದತ್ತು ಪಡೆದಿದ್ದೇನೆ. ನಾವೆಲ್ಲರೂ ಮೋದಿಜಿಯವರ ಈ ಮಾನವೀಯತೆಯ ಸೇವಾ ಕಾರ್ಯಕ್ಕೆ ಕೈಜೋಡಿಸೋಣ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಟಿಬಿ ಮುಕ್ತ ಭಾರತವನ್ನು ನಿರ್ಮಿಸೋಣ. ನೀವೂ ಸಹ ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ಟಿಬಿ ಫ್ರೀ ವರ್ಕ್‌ಪ್ಲೇಸ್ ಕ್ಯಾಂಪೇನ್’ ಉಪಕ್ರಮದ ಮೂಲಕ 2025 ರ ವೇಳೆಗೆ ಭಾರತದಿಂದ ಟಿಬಿಯನ್ನು ನಿರ್ಮೂಲನೆ ಮಾಡುವ ಸರ್ಕಾರದ ಪ್ರಯತ್ನದೊಂದಿಗೆ CII ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!