ಮುಖ್ಯಮಂತ್ರಿ ಬೊಮ್ಮಾಯಿಗೆ ಕಾಣಿಕೆಯಾಗಿ ನೀಡಿದರು ಪ್ರಧಾನಿ ಮೋದಿಯವರ ಪುತ್ತಳಿ!

ಹೊಸದಿಗಂತ ವರದಿ,ಕಲಬುರಗಿ:

ನಗರದ ನೆಹರು ಗಂಜ್ ಪ್ರದೇಶದಲ್ಲಿರುವ ವಿ.ಟಿ.ಎನ್ ಕ್ರಿಯೇಟಿವ್ ಆರ್ಟ್ ಸ್ಟುಡಿಯೋ ವತಿಯಿಂದ ಕಲಬುರಗಿ ಕಲಾವಿದರಾದ ವಿಶ್ವೇಶ್ವರಯ್ಯ ಭೋವಿಯವರು ವಿಶ್ವ ನಾಯಕ ಸನ್ಮಾನ್ಯ ನರೇಂದ್ರ ಮೋದಿ ಅವರ ಪುತಳಿಯನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಕಾಣಿಕೆಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿ ಸತ್ಕರಿಸಿದರು.

ಈ ಹಿಂದೆ ಬೆಳಗಾವಿಯ ಸುವರ್ಣಸೌಧದ ಮೇಲಿರುವ ರಾಷ್ಟ್ರೀಯ ಲಾಂಛನ ಅಶೋಕ ಸ್ತಂಭವನ್ನು , ಈ ಕಲಾವಿದರೇ ನಿರ್ಮಿಸಿರುವುದು ತುಂಬಾ ಹೆಮ್ಮೆ ವಿಷಯವಾಗಿದ್ದು ಮುಖ್ಯಮಂತ್ರಿಗಳು ಕೂಡ ನಮ್ಮ ಕಲಾವಿದರಿಗೆ ಪ್ರಶಂಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರು ಹಾಗೂ ಹಿರಿಯ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ , ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!