ಹೊಸದಿಗಂತ ಡಿಜಿಟಲ್ ಡೆಸ್ಕ್:
ಧೀಮಂತ ಜನನಾಯಕ, ದೇಶಪ್ರೇಮಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಮಹಾನ್ ರಾಷ್ಟ್ರೀಯವಾದಿ ಚಿಂತಕ, ಶಿಕ್ಷಣತಜ್ಞ ಮತ್ತು ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜಯಂತಿ ದಿನದಂದು ಧೀಮಂತ ಜನನಾಯಕನಿಗೆ ತಲೆಬಾಗಿ ನಮಿಸುತ್ತೇನೆ. ಅವರು ತಮ್ಮ ಜೀವನವನ್ನು ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟರು. ಅವರ ಆದರ್ಶಗಳು ಮತ್ತು ತತ್ವಗಳು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರಾಜಕಾರಣಿ, ಬ್ಯಾರಿಸ್ಟರ್ ಮತ್ತು ಶಿಕ್ಷಣ ತಜ್ಞರಾಗಿದ್ದ ಮುಖರ್ಜಿ ಅವರು ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಕೈಗಾರಿಕೆ ಮತ್ತು ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.