5 ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ! ಬಯಲಾಯ್ತು ಸತ್ಯ.. 6 ದುಷ್ಕರ್ಮಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಕಿಡಿಗೇಡಿಗಳು ಸತ್ತ ಹಸುವಿನ ಕಳೇಬರದಲ್ಲಿ ವಿಷವಿಕ್ಕಿ ತಾಯಿ ಹಾಗೂ 4 ಮರಿ ಹುಲಿಗಳನ್ನು ಕೊಂದಿರೋದಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಖಚಿತಪಡಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ್ದ ಅರಣ್ಯಾಧಿಕಾರಿಗಳು ಹುಲಿಗಳಿಗೆ ವಿಷ ಹಾಕಿದ್ದ ದುಷ್ಕರ್ಮಿಯೊಬ್ಬ ಸೇರಿ 6 ಜನರನ್ನ ವಶಕ್ಕೆ ಪಡೆದಿದ್ದಾರೆ.

ಸದ್ಯ ಗಾಜನೂರು ಗ್ರಾಮದ ಅರಣ್ಯ ಇಲಾಖೆ ವಿಶ್ರಾಂತಿ ಕೊಠಡಿಯಲ್ಲಿ ಆರೋಪಿಯನ್ನಿರಿಸಲಾಗಿದ್ದು, ಐವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!