ಆಟೋ ಚಾಲಕನನ್ನು ಹತ್ಯೆಗೈದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸರು

ಹೊಸದಿಗಂತ ವರದಿ, ವಿಜಯಪುರ

ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆಟೋ ಚಾಲಕನನ್ನು ಹತ್ಯೆಗೈದಿರುವ ಆರೋಪಿಗಳನ್ನು 24 ಗಂಟೆಯಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ನೂರ್‌ಅಹ್ಮದ್ ಬುಡ್ಡೆಸಾಬ್ ನಾಯಿಕ್, ಸಮೀರ ರಫೀಕ್ ನಾಯಿಕ್ ಬಂಧಿತ ಆರೋಪಿಗಳು.
ಈ ಆರೋಪಿಗಳು ಹಣಕಾಸಿನ ವಿಚಾರಕ್ಕೆ ತೌಫಿಕ್ ಮೆಹಬೂಬ್ ಚಿನಿವಾರ್‌ ನನ್ನು ಸಿಂದಗಿ ತಾಲೂಕಿನ ಜೇವರ್ಗಿ ಹೆದ್ದಾರಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದರು.
ಸಿಂದಗಿ ಪಿಎಸ್ಐ ನಿಂಗಪ್ಪ ಪೂಜಾರಿ ಹಾಗೂ ಸಿಬ್ಬಂದಿ ತಂಡ 24 ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!