ಕೊಪ್ಪಳದಲ್ಲಿ ಇಬ್ಬರು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಹೊಸದಿಗಂತ ವರದಿ, ಕೊಪ್ಪಳ:
ಕಳೆದ ಕೆಲ ದಿನಗಳ ಹಿಂದೆ ಎನ್‌ಐಎ ಹಾಗೂ ಇತರೆ ತನಿಖಾ ಸಂಸ್ಥೆಗಳು ನಡೆಸಿದ್ದ ದಾಳಿ ವೇಳೆ ಪಿಎಫ್ಐ ಜಿಲ್ಲಾಧ್ಯಕ್ಷನ ಬಂಧನವಾಗಿತ್ತು, ಮಂಗಳವಾರ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರು ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಂಗಾವತಿ ನಿವಾಸಿ ಹಾಗೂ ಸಿಎಫ್‌ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸೈಯದ್ ಸರ್ಫಾರಾಜ್ ಹುಸೇನ್ ಹಾಗೂ ಪಿಎಫ್ಐ ನ ರಸೂಲ್ ಮೊಹಮ್ಮದ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ತಿಳಿಸಿದ್ದಾರೆ.
ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ ಶಂಕಿತ ಆರೋಪಿಯೊಂದಿಗೆ ಸಂಭಾಷಣೆ ನಡೆಸಿರುವ ಸಂಶಯದ ಮೇರೆಗೆ ನಿನ್ನೆಯಷ್ಟೇ ಗಂಗಾವತಿ ನಗರ ನಿವಾಸಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಇಬ್ಬರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನು ಕೋರ್ಟ್‌ ಗೆ ಹಾಜರು ಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!